ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm