ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm