ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm