ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm