ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm