ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm