ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm