ಬ್ರೇಕಿಂಗ್ ನ್ಯೂಸ್
11-11-21 08:54 pm Headline Karnataka News Desk ಕ್ರೈಂ
ಮಂಗಳೂರು, ನ.11: ನಗರದ ಮಣ್ಣಗುಡ್ಡೆಯ ಗಾಂಧಿನಗರದಲ್ಲಿ ಶಾಸಕ ವೇದವ್ಯಾಸ ಕಾಮತ್ ಮನೆ ಬಳಿಯಲ್ಲೇ ಕಳ್ಳರು ಕೈಚಳಕ ಮೆರೆದಿದ್ದಾರೆ. ಗಾಂಧಿನಗರದ ಆರು ಮನೆಗಳಿಗೆ ಕಳ್ಳರು ತೆರಳಿದ್ದು, ಮನೆಮಂದಿ ಮಲಗಿರುವಾಗಲೇ ಎರಡು ಮನೆಗಳ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನದ ಒಡವೆಗಳನ್ನು ಕದ್ದೊಯ್ದಿದ್ದಾರೆ.
ಇಬ್ಬರು ಕಳ್ಳರ ಕೈಚಳಕ ಅಲ್ಲಿನ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ರಥಬೀದಿಯ ಸ್ಕೂಲ್ ಬುಕ್ ಕಂಪನಿಯ ಮಾಲೀಕರದ್ದು ಎನ್ನಲಾದ ಮನೆಯ ಒಳಗೆ ನುಗ್ಗಿದ್ದ ಕಳ್ಳರು ಆ ಮನೆಯಲ್ಲಿ ಒಂದೂವರೆ ಲಕ್ಷ ಮೌಲ್ಯದ ಎರಡು ಬಳೆ ಮತ್ತು ಒಂದು ಸರವನ್ನು ಕದ್ದೊಯ್ದಿದ್ದಾರೆ. ಮನೆಯ ಹಿಂಬದಿ ಬಾಗಿಲನ್ನು ಒಡೆದು ಒಳನುಗ್ಗಿದ್ದ ಕಳ್ಳರು ಮನೆಮಂದಿ ಮಲಗಿದ್ದಾಗಲೇ ಕಳ್ಳತನ ನಡೆಸಿದ್ದಾರೆ. ಮನೆ ಆವರಣದಲ್ಲಿ ಹತ್ತು ಅಡಿ ಎತ್ತರ ಗೋಡೆ ಇದ್ದು ಅದನ್ನು ಹಾರಿ ಕಂಪೌಂಡ್ ಒಳಗೆ ಬಂದಿದ್ದರು. ರಾತ್ರಿ ವೇಳೆ ಏನೋ ಶಬ್ದ ಆಗಿದ್ದರಿಂದ ಮನೆಯ ಒಬ್ಬರು ಎದ್ದು ಲೈಟ್ ಹಾಕಿದ್ದರು. ಆನಂತರ ಯಾರೂ ಇಲ್ಲವೆಂದು ಬಾಗಿಲು ಮುಚ್ಚಿ ಮಲಗಿದ್ದರು. ಆದರೆ ಹಿಂಬಾಗಿಲನ್ನು ಒಡೆದು ಕಳವುಗೈದಿದ್ದು ಬೆಳಗ್ಗಿನ ಹೊತ್ತಲ್ಲಿ ಬೆಳಕಿಗೆ ಬಂದಿದೆ. ಕಳ್ಳ ಮನೆ ಕಂಪೌಂಡ್ ಹಾರಿ ನುಗ್ಗಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.




ಅದರ ಬಳಿಯಲ್ಲೇ ಇರುವ ಮೈಸೂರು ಮೂಲದ ಎಸ್.ಕೆ. ರಾಜೇಂದ್ರ ಎಂಬವರ ಮನೆಗೂ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಬಾಗಿಲು ಹಾಕಿ ಮೈಸೂರಿಗೆ ತೆರಳಿದ್ದರು. ಆ ಮನೆಯಲ್ಲಿ ಏನೂ ಕಳವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಪರಿಸರದ ಇತರ ನಾಲ್ಕು ಮನೆಗಳಿಗೂ ಕಳ್ಳರು ಹೋಗಿದ್ದರು. ಅಲ್ಲಿ ಮನೆಯ ಒಳಗೆ ನುಗ್ಗಲು ಸಾಧ್ಯವಾಗಿರಲಿಲ್ಲ. ಎರಡು ಮನೆಗೆ ನುಗ್ಗಿದ್ದು, ಒಂದರಲ್ಲಿ ಮಾತ್ರ ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳರು 25ರಿಂದ 30ರ ವಯಸ್ಸಿನವರಾಗಿದ್ದು, ಸದ್ದಿಲ್ಲದೆ ಕಳವು ಮಾಡಿಕೊಂಡು ತೆರಳಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
Mangalore Burglars break into three houses in Gandhinagar in Mangalore near MLAs house, steal lakhs worth of valuables. Barke police have formed a special team to nab the accused.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm