ಬ್ರೇಕಿಂಗ್ ನ್ಯೂಸ್
11-11-21 08:54 pm Headline Karnataka News Desk ಕ್ರೈಂ
ಮಂಗಳೂರು, ನ.11: ನಗರದ ಮಣ್ಣಗುಡ್ಡೆಯ ಗಾಂಧಿನಗರದಲ್ಲಿ ಶಾಸಕ ವೇದವ್ಯಾಸ ಕಾಮತ್ ಮನೆ ಬಳಿಯಲ್ಲೇ ಕಳ್ಳರು ಕೈಚಳಕ ಮೆರೆದಿದ್ದಾರೆ. ಗಾಂಧಿನಗರದ ಆರು ಮನೆಗಳಿಗೆ ಕಳ್ಳರು ತೆರಳಿದ್ದು, ಮನೆಮಂದಿ ಮಲಗಿರುವಾಗಲೇ ಎರಡು ಮನೆಗಳ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನದ ಒಡವೆಗಳನ್ನು ಕದ್ದೊಯ್ದಿದ್ದಾರೆ.
ಇಬ್ಬರು ಕಳ್ಳರ ಕೈಚಳಕ ಅಲ್ಲಿನ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ರಥಬೀದಿಯ ಸ್ಕೂಲ್ ಬುಕ್ ಕಂಪನಿಯ ಮಾಲೀಕರದ್ದು ಎನ್ನಲಾದ ಮನೆಯ ಒಳಗೆ ನುಗ್ಗಿದ್ದ ಕಳ್ಳರು ಆ ಮನೆಯಲ್ಲಿ ಒಂದೂವರೆ ಲಕ್ಷ ಮೌಲ್ಯದ ಎರಡು ಬಳೆ ಮತ್ತು ಒಂದು ಸರವನ್ನು ಕದ್ದೊಯ್ದಿದ್ದಾರೆ. ಮನೆಯ ಹಿಂಬದಿ ಬಾಗಿಲನ್ನು ಒಡೆದು ಒಳನುಗ್ಗಿದ್ದ ಕಳ್ಳರು ಮನೆಮಂದಿ ಮಲಗಿದ್ದಾಗಲೇ ಕಳ್ಳತನ ನಡೆಸಿದ್ದಾರೆ. ಮನೆ ಆವರಣದಲ್ಲಿ ಹತ್ತು ಅಡಿ ಎತ್ತರ ಗೋಡೆ ಇದ್ದು ಅದನ್ನು ಹಾರಿ ಕಂಪೌಂಡ್ ಒಳಗೆ ಬಂದಿದ್ದರು. ರಾತ್ರಿ ವೇಳೆ ಏನೋ ಶಬ್ದ ಆಗಿದ್ದರಿಂದ ಮನೆಯ ಒಬ್ಬರು ಎದ್ದು ಲೈಟ್ ಹಾಕಿದ್ದರು. ಆನಂತರ ಯಾರೂ ಇಲ್ಲವೆಂದು ಬಾಗಿಲು ಮುಚ್ಚಿ ಮಲಗಿದ್ದರು. ಆದರೆ ಹಿಂಬಾಗಿಲನ್ನು ಒಡೆದು ಕಳವುಗೈದಿದ್ದು ಬೆಳಗ್ಗಿನ ಹೊತ್ತಲ್ಲಿ ಬೆಳಕಿಗೆ ಬಂದಿದೆ. ಕಳ್ಳ ಮನೆ ಕಂಪೌಂಡ್ ಹಾರಿ ನುಗ್ಗಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.




ಅದರ ಬಳಿಯಲ್ಲೇ ಇರುವ ಮೈಸೂರು ಮೂಲದ ಎಸ್.ಕೆ. ರಾಜೇಂದ್ರ ಎಂಬವರ ಮನೆಗೂ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಬಾಗಿಲು ಹಾಕಿ ಮೈಸೂರಿಗೆ ತೆರಳಿದ್ದರು. ಆ ಮನೆಯಲ್ಲಿ ಏನೂ ಕಳವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಪರಿಸರದ ಇತರ ನಾಲ್ಕು ಮನೆಗಳಿಗೂ ಕಳ್ಳರು ಹೋಗಿದ್ದರು. ಅಲ್ಲಿ ಮನೆಯ ಒಳಗೆ ನುಗ್ಗಲು ಸಾಧ್ಯವಾಗಿರಲಿಲ್ಲ. ಎರಡು ಮನೆಗೆ ನುಗ್ಗಿದ್ದು, ಒಂದರಲ್ಲಿ ಮಾತ್ರ ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳರು 25ರಿಂದ 30ರ ವಯಸ್ಸಿನವರಾಗಿದ್ದು, ಸದ್ದಿಲ್ಲದೆ ಕಳವು ಮಾಡಿಕೊಂಡು ತೆರಳಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
Mangalore Burglars break into three houses in Gandhinagar in Mangalore near MLAs house, steal lakhs worth of valuables. Barke police have formed a special team to nab the accused.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm