ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.



ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm