ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
11-12-25 12:44 pm
HK News Desk
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm