ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm