ಬ್ರೇಕಿಂಗ್ ನ್ಯೂಸ್
13-11-21 11:14 am HK NEWS DESK ಕ್ರೈಂ
ಮಧ್ಯಪ್ರದೇಶ, ನವೆಂಬರ್ 12: ಶಾಸಕರ ಅಪ್ರಾಪ್ತ ಪುತ್ರನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಬಬಲ್ ಪುರ ನಡೆದಿದೆ. ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ ಅಲಿಯಾಸ್ ವಿಭು ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ವೈಭವ್ ಯಾದವ್ (17 ವರ್ಷ) ಎಂಬಾತ ಜಬಲ್ಪುರ ಪಟ್ಟಣದ ಗೋರಖ್ಪುರ ಪ್ರದೇಶದಲ್ಲಿ ತನ್ನ ತಂದೆ ಸಂಜಯ್ ಯಾದವ್ ಅವರ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆಯುತ್ತಲೇ ವೈಭವ್ ಯಾದವ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವೈಭವ್ ಯಾದವ್ ತಂದೆ ಸಂಜಯ್ ಯಾದವ್ ಅವರು ಜಬಲ್ಪುರ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿರುವ ಬಾರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.
ಘಟನೆಯ ಬೆನ್ನಲ್ಲೇ ಪೊಲೀಸರು ಬಬಲ್ಪುರದಲ್ಲಿರುವ ಮನೆಯಲ್ಲಿ ಶಾಸಕ ಸಂಜಯ್ ಯಾದವ್ ಅವರ ರಿವಾಲ್ವಾರ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮನೆಯಲ್ಲಿ ವೈಭವ್ ಯಾದವ್ ಡೆತ್ನೋಟ್ ಪತ್ತೆಯಾಗಿದ್ದು, ಪತ್ರದಲ್ಲಿ ಸಾವಿಗೆ ನಿಖರವಾದ ಕಾರಣ ಏನೂ ಅನ್ನೋದನ್ನು ನಮೂದಿಸಿಲ್ಲ ಎಂದು ಜಬಲ್ ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಬಹುಗುಣ ಅವರು ತಿಳಿಸಿದ್ದಾರೆ ಎಂದು ಖ್ಯಾತ ಸುದ್ದಿವಾಹಿನಿ ಇಂಡಿಯಾ ಟುಡೆ ವರದಿ ಮಾಡಿದೆ.
ವೈಭವ್ ಯಾದವ್ 12ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾನೆ. ವಾಶ್ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವೈಭವ್ ಯಾದವ್ ತನ್ನ ಸ್ನೇಹಿತರಿಗೆ ಮೇಸೇಜ್ ಕಳುಹಿಸಿದ್ದು, ಅವರಿಗೆಲ್ಲರಿಗೂ ಧನ್ಯವಾದವನ್ನು ತಿಳಿಸಿದ್ದಾನೆ ಎನ್ನಲಾಗುತ್ತಿದೆ. ಆದರೆ ಶಾಸಕರ ಪುತ್ರನ ಸಾವಿಗೆ ನಿಖರವಾದ ಕಾರಣ ಮಾತ್ರ ತಿಳಿದುಬಂದಿಲ್ಲ.
Congress MLA Sanjay Yadav's minor son Vaibhav, alias Vibhu, shot himself on Thursday. He was admitted to a hospital where he died during treatment. Sanjay Yadav is an MLA from Bargi in Madhya Pradesh.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm