ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm