ಬ್ರೇಕಿಂಗ್ ನ್ಯೂಸ್
15-11-21 11:11 am HK News Desk ಕ್ರೈಂ
ಗಯಾ, ನವೆಂಬರ್ 15: ಬಿಹಾರದ ಗಯಾ ಜಿಲ್ಲೆಯ ಗ್ರಾಮವೊಂದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾವೋವಾದಿಗಳು ಕೊಂದು ಹಾಕಿದ್ದಾರೆ. ಅಲ್ಲದೇ ಅವರ ಮೃತದೇಹಗಳನ್ನು ಮನೆಯ ಅಂಗಳದಲ್ಲಿರುವ ದನದ ಕೊಟ್ಟಿಗೆಯಲ್ಲಿ ನೇಣು ಹಾಕಿದ್ದಾರೆ. ತದನಂತರ ನಕ್ಸಲರು ಬಾಂಬ್ ಬಳಸಿ ಅವರ ಮನೆಯನ್ನೂ ಸ್ಫೋಟಿಸಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಎಡಿಜಿ, ಕಾನೂನು ಮತ್ತು ಸುವ್ಯವಸ್ಥೆ ಪ್ರಕಾರ, ಬಿಹಾರ-ಜಾರ್ಖಂಡ್ ಗಡಿಗೆ ಸಮೀಪವಿರುವ ದುಮಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾನೂನುಬಾಹಿರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರು ಶನಿವಾರ ತಡರಾತ್ರಿ ಸರಯು ಸಿಂಗ್ ಭೋಕ್ತಾ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ.
ಭೋಕ್ತಾ ಮತ್ತು ಅವರ ಕುಟುಂಬವು ಪೊಲೀಸ್ ಮಾಹಿತಿದಾರರು ಎಂದು ಆರೋಪಿಸಿ ಮಾವೋವಾದಿಗಳು ಕರಪತ್ರ ಬಿಟ್ಟು ಹೋಗಿದ್ದಾರೆ. ಇದೇ ಕುಟುಂಬ ನೀಡಿದ ಸುಳಿವಿನಿಂದಾಗಿ 2021ರ ಮಾರ್ಚ್ ತಿಂಗಳಿನಲ್ಲಿ ಎನ್ಕೌಂಟರ್ ನಡೆಸಲಾಗಿತ್ತು. ಸ್ಥಳೀಯ ಪೊಲೀಸರು ಮತ್ತು ಕೋಬ್ರಾ ಬೆಟಾಲಿಯನ್ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಲಾಗಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಬೋಕ್ತಾ ಪುತ್ರರು ಮತ್ತು ಪತ್ನಿಯರ ಕೊಲೆ;
ಬಿಹಾರದ ಗಯಾ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ದಾಳಿ ನಡೆಸಿದ ಸಮಯದಲ್ಲಿ ಭೋಕ್ತಾ ಅವರು ಮನೆಯಲ್ಲಿ ಇರಲಿಲ್ಲ. ಈ ವೇಳೆ ಮನೆಯಲ್ಲಿದ್ದ ಅವರ ಇಬ್ಬರು ಪುತ್ರರು ಹಾಗೂ ಪತ್ನಿಯರನ್ನು ದುಷ್ಕರ್ಮಿಗಳು ಕೊಂದು, ದನದ ಕೊಟ್ಟಿಗೆಯಲ್ಲಿರುವ ಬಿದಿರಿನ ಕಂಬಕ್ಕೆ ಶವಗಳನ್ನು ನೇತು ಹಾಕಿದ್ದಾರೆ. ತದನಂತರ ಸ್ಫೋಟಕಗಳನ್ನು ಬಳಸಿ ಮನೆಯನ್ನು ಸ್ಫೋಟಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಕ್ಸಲರ ಪತ್ತೆಗೆ ಶೋಧ ಕಾರ್ಯಾಚರಣೆ;
ಆರೋಪಿಗಳ ಪತ್ತೆಗಾಗಿ ಗಯಾ ಎಸ್ಎಸ್ಪಿ ಆದಿತ್ಯ ಕುಮಾರ್ ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಶೋಧ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಕಳೆದ ನವೆಂಬರ್ 24ರಂದು ಈ ಪ್ರದೇಶದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುಂಚಿತವಾಗಿ ಬರುವ ನಕ್ಸಲ್ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು ಜಾರ್ಖಂಡ್ನ ಗಡಿಯಲ್ಲಿರುವ ಇತರ ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರಿಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲು ತಿಳಿಸಲಾಗಿದೆ.
Four people of the same family were hanged to death late on Saturday night in Manuwar village of Dumaria in Bihar's Gaya. The attack was reportedly carried out by Naxals. Dumaria is a highly naxal-affected area of the district. It is being reported that banned Naxalite organization, CPI-Maoists blew up two houses with dynamite. The attack is said to be a 'retaliation' for an operation carried out by police last week.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm