ಬ್ರೇಕಿಂಗ್ ನ್ಯೂಸ್
16-11-21 08:08 am Mangaluru Correspondent ಕ್ರೈಂ
ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ.
ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು. ಇವರು ಮುಕ್ಕದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸಂಜೆಯ ವಿಹಾರ ಮುಗಿಸಿ ರಾತ್ರಿ ಹತ್ತು ಗಂಟೆ ವೇಳೆಗೆ ಹುಡುಗಿಯನ್ನು ಬೈಕಿನಲ್ಲಿ ಇಡ್ಯಾದ ಕಲ್ಯಾಣಿ ಪರ್ಲ್ ಅಪಾರ್ಟ್ ಮೆಂಟಿಗೆ ಬಿಡಲು ತೆರಳುತ್ತಿದ್ದ.



ಬೈಕ್ ಅಪಾರ್ಟ್ಮೆಂಟ್ ತಲುಪುತ್ತಿದ್ದಂತೆ ತಡೆದು ನಿಲ್ಲಿಸಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ಹೆಸರೇನೆಂದು ಕೇಳಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿಯನ್ನು ಕೈಯಲ್ಲಿ ಹಿಡಿದು ನೆಲಕ್ಕೆ ದೂಡಿ ಹಾಕಿದ್ದು ನಿನಗೆ ಬ್ಯಾರಿಯೇ ಆಗಬೇಕಾ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್ , ಪ್ರತೀಶ್, ಭರತ್, ಸುಕೇಶ್ ಎಂದು ಗುರುತಿಸಲಾಗಿದೆ.
ಎರಡು ತಿಂಗಳ ಹಿಂದೆ ಸುರತ್ಕಲ್ ಪೇಟೆಯಲ್ಲಿ ಇದೇ ರೀತಿ ಬೊಲೆರೋ ಜೀಪಿನಲ್ಲಿ ಮಲ್ಪೆ ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದ ವಿದ್ಯಾರ್ಥಿ - ವಿದ್ಯಾರ್ಥಿನಿಯರಿದ್ದ ತಂಡದ ಮೇಲೆ ಹಿಂದು ಸಂಘಟನೆಯ ಯುವಕರು ದಾಳಿ ನಡೆಸಿದ್ದರು. ಪೊಲೀಸ್ ಅಧಿಕಾರಿಯ ಮುಂದೆಯೇ ಘಟನೆ ನಡೆದಿತ್ತು. ಇದೀಗ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲೇ ಮತ್ತೊಂದು ಕೃತ್ಯ ನಡೆದಿದೆ. ಹಿಂದು ಹುಡುಗಿ ಎಂದು ನಂಬಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Another Moral Policing case reported in Surathkal seven have been arrested by Surathkal Police. Girl who was travelling with Muslim guy on the bike was stopped, abused and assulted.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm