ಬ್ರೇಕಿಂಗ್ ನ್ಯೂಸ್
            
                        18-11-21 05:15 pm Mangaluru correspondent ಕ್ರೈಂ
            ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
            
            
            Mangalore Robbery in Urwa store, Burglars enter home loot cash and gold.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm