ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm