ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm