ಬ್ರೇಕಿಂಗ್ ನ್ಯೂಸ್
20-11-21 10:29 pm Mangaluru Correspondent ಕ್ರೈಂ
ಬಂಟ್ವಾಳ, ನ.20: ರಸ್ತೆಯ ವಿಚಾರದಲ್ಲಿ ಎರಡು ಮನೆಗಳ ಮಧ್ಯೆ ಜಾಗದ ತಕರಾರು ಇದ್ದರೂ, ಮಧ್ಯಪ್ರವೇಶ ಮಾಡಿದ ದಲಿತ ಸಂಘಟನೆಯ ನಾಯಕರು ಮೇಲ್ವರ್ಗದ ಪರವಾಗಿ ವಕಾಲತ್ತು ವಹಿಸಿದ್ದಲ್ಲದೆ ದಲಿತ ಮಹಿಳೆಯನ್ನೇ ಕತ್ತು ಹಿಡಿದು ತಳ್ಳಿ ಹಲ್ಲೆಗೈದ ಘಟನೆ ತಾಲೂಕಿನ ವಾಮದಪದವು ಬಳಿಯ ಬಸ್ತಿಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಸ್ತಿಕೋಡಿ ಪಂಚಾಯತಿಗೆ ಒಳಪಟ್ಟ ಕೊಡಂಬೆಟ್ಟಿನ ಆಲೆಪ್ಪಾಡಿ ಎಂಬಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಶಾಂತ (55) ಎಂಬ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯವರಿಗೂ, ನೆರೆಮನೆಯ ನವೀನ್ ಪೂಜಾರಿ ಎಂಬವರ ಮಧ್ಯೆ ಜಾಗದ ತಕರಾರು ಇತ್ತು. ಕಳೆದ ಕೆಲವು ವರ್ಷಗಳಿಂದ ನವೀನ್ ಪೂಜಾರಿ ಮನೆಯವರು ಮಹಿಳೆಯ ಮನೆಯವರಿಗೆ ಸೇರಿದ್ದ ಜಾಗದಲ್ಲಿ ಹೋಗಿ ಬರುತ್ತಿದ್ದರು. ಆದರೆ, ಇತ್ತೀಚೆಗೆ ಸದ್ರಿ ಜಾಗವನ್ನು ಪೋರ್ಜರಿ ದಾಖಲೆ ಸೃಷ್ಟಿಸಿ, ತಮ್ಮ ಹೆಸರಿಗೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಮಹಿಳೆಯ ಮನೆಯವರು ಆಕ್ಷೇಪ ತೆಗೆದಿದ್ದರು. ಅಲ್ಲದೆ, ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಕಡೆ ದೂರನ್ನೂ ನೀಡಿದ್ದರು. ಅಲ್ಲದೆ, ನವೀನ್ ಮನೆಯವರು ಹೋಗಿ ಬರುತ್ತಿದ್ದ ಜಾಗಕ್ಕೆ ಅಡ್ಡಲಾಗಿ ಬೇಲಿ ಹಾಕಿದ್ದರು.






ಇದರಿಂದ ಎರಡೂ ಮನೆಯವರಿಗೆ ಜಟಾಪಟಿ ನಡೆದಿತ್ತು. ನ.18ರಂದು ಮಧ್ಯಾಹ್ನ ನವೀನ್ ಮನೆಯವರು ಏಕಾಏಕಿ ಜೆಸಿಬಿ ತಂದು ಬೇಲಿಯನ್ನು ಕಿತ್ತೆಸೆದು ರಸ್ತೆ ಮಾಡಿದ್ದಾರೆ. ಈ ವೇಳೆ, ಜೆಸಿಬಿ ಕಾಮಗಾರಿ ತಡೆಯಲು ಹೋಗಿದ್ದ ಮಹಿಳೆಯ ಮೇಲೆ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜನಾರ್ದನ ಚೆಂಡ್ತಿಮಾರ್, ಚಂದ್ರಶೇಖರ ಕುಕ್ಕಿಮಾರ್, ಉಮೇಶ್ ಕುಮಾರ್ ಎಂಬವರ ನೇತೃತ್ವದಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ.
ಐದಾರು ಮಂದಿ ಏಕಾಏಕಿ ದಾಳಿ ನಡೆಸಿದ್ದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಳಿಕ ವಾಮದಪದವು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರಿಂದ ಆಕೆಯ ಮಕ್ಕಳು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹಲ್ಲೆ ಯತ್ನ ಕೇಸು ದಾಖಲಿಸಿ ಆರೋಪಿಗಳ ಪರ ನಿಂತಿದ್ದಾರೆಂದು ದೂರಲಾಗಿದೆ. ಜಾಗದಲ್ಲಿ ಬೆಳೆಸಿದ್ದ ಬಾಳೆ ಇನ್ನಿತರ ಕೃಷಿಯನ್ನು ಕಿತ್ತುಹಾಕಿ, ಅಲ್ಲಿ ರಸ್ತೆ ಮಾಡಲಾಗಿದೆ. ಅಲ್ಲದೆ, ದಲಿತ ಸಂಘಟನೆ ಎಂದು ಹೇಳಿಕೊಂಡು ತಿರುಗಾಡುವ ಮಂದಿಯೇ ಎದುರು ಮನೆಯ ನವೀನ್ ಪೂಜಾರಿ ಜೊತೆ ಸೇರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಹಿಳೆಯ ಪುತ್ರ ನವೀನ್ ಆರೋಪಿಸಿದ್ದಾರೆ.
Bantwa, Vamadapadavu Dalit Woman assaulted by Dalit community members and goons over a property dispute, woman hospitalised.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm