ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm