ಬ್ರೇಕಿಂಗ್ ನ್ಯೂಸ್
            
                        21-11-21 10:55 pm Mangaluru Correspondent ಕ್ರೈಂ
            ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
            
            
            Land Dispute, Woman shot through Gun by a relative in Puttur, serious in hospital.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm