ಬ್ರೇಕಿಂಗ್ ನ್ಯೂಸ್
            
                        22-11-21 07:41 pm HK News Desk ಕ್ರೈಂ
            ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
            
            
            Bangalore Woman Cheated of 45 lakhs on Instagram
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm