ಬ್ರೇಕಿಂಗ್ ನ್ಯೂಸ್
22-11-21 07:41 pm HK News Desk ಕ್ರೈಂ
ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bangalore Woman Cheated of 45 lakhs on Instagram
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm