ಬ್ರೇಕಿಂಗ್ ನ್ಯೂಸ್
26-11-21 12:19 pm HK news Desk ಕ್ರೈಂ
ಮಂಗಳೂರು, ನ.26: ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನಾಲ್ಕು ದಿನಕ್ಕೆ ಕಸ್ಟಡಿ ಪಡೆದಿದ್ದಾರೆ.

ಮಧ್ಯಪ್ರದೇಶ ಮೂಲದ ಜಯ್ ಬನ್ ಅಲಿಯಾಸ್ ಜೈಸಿಂಗ್, ಮುಕೇಶ್ ಸಿಂಗ್, ಮುನೀಮ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಮನೀಶ್ ತಿರ್ಕೆ ಆರೋಪಿಗಳಾಗಿದ್ದು, ನಾಲ್ವರನ್ನೂ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿರುವ ಇವರಲ್ಲಿ ಮೂವರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ತಿರ್ಕೆಯನ್ನು ಕರೆಸಿಕೊಂಡು ನ.21ರಂದು ಅದೇ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ದಂಪತಿಯ ಎಂಟು ವರ್ಷದ ಪುತ್ರಿಯನ್ನು ತಮ್ಮ ಕೊಠಡಿಗೆ ಹೊತ್ತೊಯ್ದು ಕೃತ್ಯ ಎಸಗಿದ್ದರು.


ಒಬ್ಬನ ನಂತರ ಇನ್ನೊಬ್ಬನಂತೆ ಅತ್ಯಾಚಾರ ಎಸಗಿದ್ದು, ನೋವಿನಿಂದ ಚೀರಾಡಿದ ಬಾಲಕಿಯನ್ನು ಕೊನೆಗೆ ಕತ್ತು ಹಿಸುಕಿ ಕೊಲೆಗೈದಿದ್ದರು. ಶವವನ್ನು ಅಲ್ಲಿಯೇ ಟೈಲ್ಸ್ ಫ್ಯಾಕ್ಟರಿಯ ಒಳಭಾಗದಿಂದ ಹರಿದು ಹೋಗುತ್ತಿದ್ದ ನೀರಿನ ಚರಂಡಿಗೆ ಎಸೆದು ಹೋಗಿದ್ದರು. ಸಂಜೆಯಾಗುತ್ತಿದ್ದಂತೆ ಶವ ಪತ್ತೆಯಾಗಿದ್ದು ಪೈಶಾಚಿಕ ಕೃತ್ಯದ ಬಗ್ಗೆ ಭಾರೀ ಆಕ್ರೋಶ ಎದ್ದಿತ್ತು. ಪೊಲೀಸರು ಟೈಲ್ಸ್ ಫ್ಯಾಕ್ಟರಿಯಲ್ಲಿ 20 ಮಂದಿ ಉತ್ತರ ಭಾರತೀಯ ಕಾರ್ಮಿಕರನ್ನು ವಶಕ್ಕೆ ಪಡೆದು ಬೆಂಡೆತ್ತಿದ್ದಾರೆ. ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ತಮ್ಮನ್ನು ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮತ್ತೆ ನಾಲ್ಕು ದಿನಕ್ಕೆ ಕಸ್ಟಡಿ ಪಡೆದುಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಹಲವು ಸಂಘಟನೆಗಳು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Four persons who have been accused of committing the macabre act of raping an eight-year-old girl in turns inside the premises of Raj Tiles Factory at Parari near Ulaibettu in the outskirts of the city and strangiulating her to death and then dumpling her body in a drain were arrested by the city police on November 24. The four have been sent to four-day police custody.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm