ಬ್ರೇಕಿಂಗ್ ನ್ಯೂಸ್
28-11-21 05:52 pm Mangaluru Correspondent ಕ್ರೈಂ
ಮಂಗಳೂರು, ನ.28: ನಗರದ ಎರಡು ಪ್ರತ್ಯೇಕ ನರ್ಸಿಂಗ್ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ.
ಮೂಲತಃ ಕಣ್ಣೂರು ಜಿಲ್ಲೆಯ ಪಾಪಿನಶ್ಶೇರಿ ನಿವಾಸಿ, ಇಂಡಿಯಾನಾ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿ ಅಮಲ್ ಗಿರೀಶ್ ಎಂಬಾತ ಪಾಂಡೇಶ್ವರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ನ.26ರಂದು ಸಂಜೆ ಗೆಳೆಯರಾದ ಅಭಿಜಿತ್, ಕಾರ್ತಿಕ್, ಅಭಿಷೇಕ್, ಜೋಯೆಲ್ ಮತ್ತು ಅಬಿನ್ ಜೊತೆಗೆ ನಾವು ಡಿಮಾರ್ಟ್ ಸೆಂಟರಿಗೆ ಶಾಪಿಂಗ್ ಹೋಗಿದ್ದೆವು. ಶಾಪಿಂಗ್ ಬಳಿಕ, ಅಭಿಜಿತ್, ಕಾರ್ತಿಕ್, ಅಬಿನ್, ಜೋಯೆಲ್ ಅವರ ರೂಮಿಗೆ ಹಿಂತಿರುಗಿದ್ದರು. ನಾನು ಮತ್ತು ಕಾರ್ತಿಕ್, ಅತ್ತಾವರದ ಲೀ ರಾಯಲ್ ಅಪಾರ್ಟ್ಮೆಂಟಿನಲ್ಲಿ ನೆಲೆಸಿದ್ದು, 7.30ರ ಸುಮಾರಿಗೆ ಅಲ್ಲಿಗೆ ತಲುಪಿದ್ದೆವು. ಆ ಸಂದರ್ಭದಲ್ಲಿ 5 ಮಂದಿ ಮಲಯಾಳಂ ಮಾತನಾಡುತ್ತಿದ್ದ ಯುವಕರು ಎದುರಾಗಿದ್ದಾರೆ.
ಅವರು ನಮ್ಮನ್ನು ಹೈ ಎಂದು ಹೇಳುವಂತೆ ಒತ್ತಾಯಿಸುತ್ತಾ ನಮ್ಮ ಬೆನ್ನ ಹಿಂದೆಯೇ ಬಂದಿದ್ದಾರೆ. ಆನಂತರ ಇನ್ನೂ ನಾಲ್ಕು ಮಂದಿ ಯುವಕರು ಅಲ್ಲಿಗೆ ಬಂದಿದ್ದು ನಮ್ಮ ರೂಮಿನೊಳಗೆ ಬಂದಿದ್ದಾರೆ. ನನಗೆ ತೀವ್ರ ರೀತಿಯಲ್ಲಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಬಲವಂತದಿಂದ ನನ್ನ ಅರ್ಧ ಗಡ್ಡ ತೆಗೆಯುವಂತೆ ಮಾಡಿದ್ದಾರೆ. ಅಲ್ಲದೆ, ನಾನು ಮತ್ತು ಗೆಳೆಯ ಕಾರ್ತಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮಲ್ಲಿ ಹಣ ಕೊಡುವಂತೆ ಪೀಡಿಸಿದ್ದಾರೆ. ಕಾರ್ತಿಕ್ ಮೇಲೆ ಹೆಲ್ಮೆಟ್ ನಲ್ಲಿ ಹೊಡೆದಿದ್ದಾರೆ. ನೀವು ಹಣ ಕೊಡದೇ ಇದ್ದರೆ ಕೊಂದು ಬಿಡುತ್ತೇವೆ ಎಂದು ಬೆದರಿಸಿದ್ದಾರೆ. ಬಳಿಕ ನನ್ನ ಖಾತೆಯಿಂದ 270 ರೂ.ಗಳನ್ನು ಅವರಲ್ಲೊಬ್ಬನ ಖಾತೆಗೆ ವರ್ಗಾಯಿಸಿದ್ದೇನೆ. ರಾತ್ರಿ 8.30ರ ವರೆಗೂ ರೂಮಿನಲ್ಲೇ ಇದ್ದು ಕಿರುಕುಳ ನೀಡಿದ್ದಾರೆ.
ಅವರೊಳಗೆ ಮಾತನಾಡುತ್ತಿದ್ದಾಗ ಅವರ ಹೆಸರು ಅಬಿನ್ ಅಲೆಕ್ಸ್, ನಂದು ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲನ್ ಎಂಬುದಾಗಿ ತಿಳಿದುಬಂದಿದ್ದು, ಕಿರುಕುಳ ನೀಡಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಮಲ್ ಗಿರೀಶ್ ಎಂಬಾತ ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದ. ಇದರಂತೆ, ಪಾಂಡೇಶ್ವರ ಪೊಲೀಸರು ನ.27ರಂದು ಕಲಂ 143, 147, 148, 342, 323, 324, 386, 149 ಹಾಗೂ ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆಯಡಿ ಕೇಸು ದಾಖಲು ಮಾಡಿದ್ದರು. ತನಿಖೆ ನಡೆಸಿದ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಬಂಧಿತರು ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.
Kerala students ragging in Mangalore, shave beard and torture Junior, 10 arrested by Pandeshwar Police station.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm