ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm