ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm