ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm