ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm