ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm