ಬ್ರೇಕಿಂಗ್ ನ್ಯೂಸ್
            
                        29-11-21 10:54 pm Mangaluru Correspondent ಕ್ರೈಂ
            ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
            
            
            One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm