ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm