ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm