ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm