ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm