ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm