ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm