ಬ್ರೇಕಿಂಗ್ ನ್ಯೂಸ್
30-11-21 07:00 pm HK Desk news ಕ್ರೈಂ
Photo credits : Headline Karnataka
ಮಂಗಳೂರು, ನ.30: ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಪಂಚಾಯತ್ ಅಧ್ಯಕ್ಷರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕಂದಾವರ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಕೈಕಂಬ ಬಳಿಯ ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಉಮೇಶ್ ಮೂಲ್ಯ ಇಂದು ಮಧ್ಯಾಹ್ನ ಪಿಡಿಓ ಯಶವಂತ ಕಚೇರಿಗೆ ತೆರಳಿ, ಪಂಚಾಯತ್ ನಿರ್ಣಯ ಪುಸ್ತಕವನ್ನು ಕೇಳಿದ್ದಾರೆ. ಆದರೆ, ಪಿಡಿಓ ಅಧಿಕಾರಿ ಪುಸ್ತಕವನ್ನು ನೀಡಲು ನಿರಾಕರಿಸಿದ್ದಾರೆ. ಅದಕ್ಕೆ ನಮಗೆ ಪಂಚಾಯತ್ ನಿರ್ಣಯ ಪುಸ್ತಕವನ್ನು ಪಡೆಯುವುದಕ್ಕೂ ಅಧಿಕಾರ ಇಲ್ಲವೇ ಎಂದು ಪಂಚಾಯತ್ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಪಿಡಿಓ ಯಶವಂತ್, ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯರನ್ನು ದೂಡಿ ಹಾಕಿದ್ದು ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ. ಇದರ ಪೆಟ್ಟಿಗೆ ಉಮೇಶ್ ಮೂಲ್ಯ ನೆಲಕ್ಕೆ ಬಿದ್ದಿದ್ದು, ಗಲ್ಲಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪಂಚಾಯತ್ ಸದಸ್ಯರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪಿಡಿಓ ಯಶವಂತ್ ಹಿಂದಿನಿಂದಲೂ ಸಾರ್ವಜನಿಕರು ಮತ್ತು ಪಂಚಾಯತ್ ಸದಸ್ಯರ ಜೊತೆ ದುರ್ವರ್ತನೆ ತೋರುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಂಚಾಯತ್ ನಲ್ಲಿ ಯಾವುದೇ ವಿಚಾರದ ಬಗ್ಗೆ ಮಾಹಿತಿ ಕೇಳಿದರೂ, ಆತ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಕೆಲವು ಪಂಚಾಯತ್ ಸದಸ್ಯರು ಸೇರಿ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋನ್ ಮಾಡಿದ್ದಾಗ, ಪಿಡಿಓ ಯಶವಂತ್ ಉಲ್ಟಾ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದೀಗ ಬಿಜೆಪಿ ಆಡಳಿತದ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿ ಪಿಡಿಓ ಮತ್ತೆ ಸುದ್ದಿಯಾಗಿದ್ದಾರೆ.
Mnagalore Kandavara panchayat President assaulted by PDO in office. President Umesh when asked of a record book from Pdo Yashwant. Pdo who refused to give the book started to fight and that landed to assault.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm