ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm