ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm