ಬ್ರೇಕಿಂಗ್ ನ್ಯೂಸ್
14-09-20 11:08 am Headline Karnataka News Network ಕ್ರೈಂ
ಹೊಸದಿಲ್ಲಿ, ಸೆಪ್ಟೆಂಬರ್ 14: ಕಳೆದ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
ಕನಿಷ್ಠ 53 ಮಂದಿ ಮೃತಪಟ್ಟು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಪಡೆಯ ವಿಶೇಷ ಘಟಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿತ್ತು. ಖಾಲಿದ್ ಅವರನ್ನು ರವಿವಾರ ವಿಚಾರಣೆ ಸಲುವಾಗಿ ಕರೆಸಿಕೊಳ್ಳಲಾಗಿತ್ತು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೂ ಮುನ್ನ ಎರಡು ತಿಂಗಳಲ್ಲಿ ಎರಡು ಬಾರಿ ಖಾಲಿದ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. "ರವಿವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಘಟಕ ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಮುನ್ನ ಖಾಲಿದ್ ಅವರು ಮಾಜಿ ಎಎಪಿ ಕೌನ್ಸಿಲರ್ ತಾಹೀರ್ ಹುಸೈನ್ ಮತ್ತು ಹೋರಾಟಗಾರರಾದ ಖಾಲಿದ್ ಸೈಫಿ ಜತೆ ಸೇರಿ ದೆಹಲಿ ಗಲಭೆಯ ಸಂಚು ರೂಪಿಸಿದ್ದರು. ನಾಲ್ಕು ಆರೋಪಪಟ್ಟಿಗಳಲ್ಲಿ ವಿವರಿಸಿದಂತೆ ಎಎಪಿ ಮಾಜಿ ಕೌನ್ಸಿಲರ್ ಹುಸೈನ್ ಹಾಗೂ ಸೈಫಿಯವರನ್ನು ಖಾಲಿದ್ ಜನವರಿ 8ರಂದು ಶಹೀನ್ ಭಾಗ್ ಧರಣಿ ಸ್ಥಳದಲ್ಲಿ ಭೇಟಿ ಮಾಡಿ ದಂಗೆಯ ಯೋಜನೆ ರೂಪಿಸಿದ್ದರು. ಆದರೆ ಖಾಲಿದ್ ಪತ್ರಿಕಾ ಹೇಳಿಕೆ ನೀಡಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.
ತಾಹೀರ್ ಹುಸೈನ್, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್, ಜಾಮಿಯಾ ಸಂಚಾಲನಾ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗರ್ ಮತ್ತು ಪಿಂಜ್ರಾ ಟೋಡ್ ಹೋರಾಟಗಾರ್ತಿ ನತಾಶಾ ನರ್ವಾಲ್ ಹಾಗೂ ದೇವಾಂಗನಾ ಕಲಿತಾ ಅವರನ್ನು ಈಗಾಗಲೇ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm