ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm