ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm