ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm