ಬ್ರೇಕಿಂಗ್ ನ್ಯೂಸ್
07-12-21 10:54 pm HK Desk news ಕ್ರೈಂ
ಬೆಂಗಳೂರು, ಡಿ.8: ಎಟಿಎಂನಲ್ಲಿ ಹಣ ತುಂಬುತ್ತಿದ್ದ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಬೆಂಗಳೂರು ಹಾಗೂ ದುಬೈ ನಡುವಿನ ಭಾರೀ ದೊಡ್ಡ ಹವಾಲಾ ದಂಧೆಯನ್ನು ಪತ್ತೆ ಮಾಡಿದ್ದಾರೆ. ಪ್ರಕರಣದಲ್ಲಿ 3 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹವಾಲಾ ದಂಧೆ ಪತ್ತೆಯಾಗಿದೆ.
ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಜಾಲ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಜಾರಿ ನಿರ್ದೇಶನಾಲಯ ಮತ್ತು ಐಟಿ ಅಧಿಕಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಸಾವಿರಾರು ಕೋಟಿ ಮೊತ್ತದ ಹವಾಲಾ ದಂಧೆ ಬೆಳಕಿಗೆ ಬಂದಿದೆ. ದುಬೈನಿಂದ ಬರುತ್ತಿದ್ದ ಸೂಚನೆ ಅನುಸರಿಸಿ, ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ತಂಡಕ್ಕೆ ಲಕ್ಷ ಲಕ್ಷ ಹಣ ರವಾನೆಯಾಗುತ್ತಿತ್ತು. ಆ ಹಣವನ್ನು ಕೇರಳ ಮೂಲದವರ ಬ್ಯಾಂಕ್ ಖಾತೆಗಳಿಗೆ ಎಟಿಎಂಗಳಲ್ಲಿ ಇರುವ ಸಿಡಿಎಂ (ಕ್ಯಾಶ್ ಡೆಪಾಸಿಟ್ ಮಷಿನ್) ಯಂತ್ರಗಳ ಮೂಲಕ ತುಂಬಲಾಗುತ್ತಿತ್ತು. ಕೇವಲ 10 ಬ್ಯಾಂಕ್ ಖಾತೆಗಳಲ್ಲಿ 34 ಕೋಟಿ ರೂ. ವಹಿವಾಟು ನಡೆದಿರುವ ಸ್ಫೋಟಕ ಸಂಗತಿ ಬಯಲಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ವಹಿವಾಟು ನಡೆದಿರುವ ಸುಮಾರು 2684 ಬ್ಯಾಂಕ್ ಖಾತೆಗಳ ವಿವರ ನೀಡುವಂತೆ ಪೊಲೀಸರು ಸಂಬಂಧಪಟ್ಟ ಬ್ಯಾಂಕ್ ನವರಿಗೆ ಸೂಚನೆ ನೀಡಿದ್ದಾರೆ. ಬ್ಯಾಂಕುಗಳಲ್ಲಿ ನಡೆದಿರುವ ವಹಿವಾಟು ನೋಡಿದರೆ 3 ಸಾವಿರ ಕೋಟಿ ರೂ. ಅಧಿಕ ವಹಿವಾಟು ನಡೆದಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಎಟಿಎಂಗಳಲ್ಲಿ ಹಣ ತುಂಬುತ್ತಿದ್ದ ನಾಲ್ವರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರಿಯಾಜ್ ಎಂಬಾತ ದುಬೈನಲ್ಲಿ ಕೂತು ಹವಾಲಾ ದಂಧೆ ನಿರ್ವಹಣೆ ಮಾಡುತ್ತಿದ್ದ. ದಿನಕ್ಕೆ 40 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಬ್ಲಾಕ್ ಮನಿಯನ್ನು ವಿವಿಧ ಖಾತೆಗಳಿಗೆ ಹೂಡಿಕೆ ಮಾಡುವ ಮೂಲಕ ವೈಟ್ ಮಾಡಿಸುತ್ತಿದ್ದ ವಿಚಾರವೂ ಬಯಲಾಗಿದೆ. ಇದೆಲ್ಲವನ್ನೂ ಕಿಂಗ್ ಪಿನ್ ರಿಯಾಜ್ ನಡೆಸುತ್ತಿದ್ದ ಎನ್ನೋದು ಬಯಲಾಗಿದೆ.


ಕೇರಳದ ವ್ಯಕ್ತಿಗಳಿಂದ ಹಣ ರವಾನೆ
ದುಬೈನಿಂದ ಆಪರೇಟ್ ಆಗುತ್ತಿರುವ ಈ ಬ್ಲಾಕ್ ಅಂಡ್ ವೈಟ್ ದಂಧೆ ಹಿಂದೆ ಬೇರೆ ಯಾರಿದ್ದಾರೆ ಎನ್ನೋದು ತನಿಖೆ ಆಗಬೇಕಿದೆ. ದುಬೈನಲ್ಲಿರುವ ವ್ಯಕ್ತಿಗಳ ಸೂಚನೆ ಮೇರೆಗೆ ಕೇರಳದ ವ್ಯಕ್ತಿಗಳಿಂದ ಹಣ ರವಾನೆ ಆಗುತ್ತಿತ್ತು. ಕೇರಳದಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಹಣವನ್ನು ವಿವಿಧ ವ್ಯಕ್ತಿಗಳು ಎಟಿಎಂ ಕೇಂದ್ರಗಳಲ್ಲಿ ಸುಮಾರು 25 ಬ್ಯಾಂಕ್ ಗಳ ಮೂಲಕ ಸಂಬಂಧಿಸಿದ 3000 ಬ್ಯಾಂಕ್ ಖಾತೆಗಳಿಗೆ ತುಂಬಲಾಗುತ್ತಿತ್ತು. ಹೀಗೆ ಅನೇಕ ವರ್ಷಗಳಿಂದ ಈ ದಂಧೆ ನಡೆಸಿಕೊಂಡು ಬರಲಾಗುತ್ತಿದೆ. ಎಟಿಎಂ ಕೇಂದ್ರಗಳಲ್ಲಿ ಹಣ ತುಂಬಲೆಂದೇ ನಾಲ್ವರು ಕೇರಳ ಮೂಲದ ಯುವಕರನ್ನು ಬೆಂಗಳೂರಿನಲ್ಲಿ ಮನೆ ಮಾಡಿಕೊಟ್ಟು ಇರಿಸಲಾಗಿತ್ತು. ಆ ಮನೆ ಮೇಲೆ ದಾಳಿ ಮಾಡಿದಾಗ 30 ಲಕ್ಷ ರೂ. ನಗದು ಹಣ ಮತ್ತು ಸುಮಾರು 3 ಸಾವಿರ ಬ್ಯಾಂಕ್ ಖಾತೆಗಳ ವಿವರ ಸಿಕ್ಕಿವೆ.

ತೆರಿಗೆ ವಂಚಿಸಿ ಈ ರೀತಿಯ ಬ್ಲಾಕ್ ಅಂಡ್ ವೈಟ್ ದಂಧೆ ಮಾಡುತ್ತಿದ್ದು, ಈ ಹಣ ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿತ್ತು? ದೇಶದ್ರೋಹಿ ಕೃತ್ಯಗಳಿಗೆ ಬಳಕೆಗೆ ಮಾಡಲಾಗುತ್ತಿತ್ತಾ? ಕೇರಳದಲ್ಲಿ ಮಾಡಿದರೆ ಸಿಕ್ಕಿ ಬೀಳಬಹುದೆಂಬ ಕಾರಣಕ್ಕೆ ಬೆಂಗಳೂರನ್ನು ಸೆಂಟರ್ ಮಾಡಿಕೊಂಡಿದ್ದರಾ? ಈ ರೀತಿಯ ಜಾಲದ ಹಿಂದೆ ಉಗ್ರವಾದಿ ಸಂಘಟನೆಗಳ ಕೈವಾಡ ಇದೆಯಾ ಎನ್ನುವ ಅನುಮಾನಗಳಿದ್ದು ವಹಿವಾಟು ದೊಡ್ಡ ಮಟ್ಟದಲ್ಲಿ ಹಬ್ಬಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇಡಿ ಅಧಿಕಾರಿಗಳಿಂದ ತನಿಖೆ
ಮೇಲ್ನೋಟಕ್ಕೆ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದ ಲಿಂಕ್ ಹೊಂದಿದ್ದು ಹೀಗಾಗಿ ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಹಣ ದುಬೈನಿಂದ ಯಾರು ಕಳುಹಿಸುತ್ತಿದ್ದರು. ದುಬೈನಿಂದ ಹವಾಲಾ ಮೂಲಕ ಕೇರಳ ತಲುಪುತ್ತಿದ್ದ ಹಣ ಬೆಂಗಳೂರಿಗೆ ಹೇಗೆ ಬರ್ತಿತ್ತು? ಇದರಲ್ಲಿ ಶಾಮೀಲಾಗಿರುವ ದೊಡ್ಡ ಕುಳಗಳು ಯಾವುವು ಎಂಬುದನ್ನು ಇಡಿ ಅಧಿಕಾರಿಗಳೇ ಬಯಲಿಗೆ ಎಳೆಯಬೇಕಿದೆ.
Hawala to Dubai from Bangalore, three arrested more than three thousand crores hawala found. The arrested we're working in depositing money to ATM machines in Kerala.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm