ಬ್ರೇಕಿಂಗ್ ನ್ಯೂಸ್
10-12-21 02:42 pm HK Desk news ಕ್ರೈಂ
ಮಂಗಳೂರು, ಡಿ.10 : ಅರೆಕಾಲಿಕ ಉದ್ಯೋಗದ ಬೆನ್ನುಬಿದ್ದ ವ್ಯಕ್ತಿಯೊಬ್ಬ ಅಪರಿಚಿತ ವ್ಯಕ್ತಿಯ ಸಂದೇಶ ನಂಬಿ, ಬರೋಬ್ಬರಿ 5.31 ಲಕ್ಷ ರೂಪಾಯಿ ಕಳಕೊಂಡ ಘಟನೆ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯಿಂದ ನ.26ರಂದು ಪಾರ್ಟ್ ಟೈಮ್ ಉದ್ಯೋಗಕ್ಕೆ ನೀವು ಆಯ್ಕೆಯಾಗಿದ್ದೀರೆಂದು ಮೊಬೈಲಿಗೆ ಮೆಸೇಜ್ ಬಂದಿತ್ತು. ಅದರ ಜೊತೆಗೆ ಒಂದು ಲಿಂಕ್ ಕೂಡ ಇತ್ತು. ಸಂದೇಶದ ಬೆನ್ನುಹತ್ತಿದ ಮಂಗಳೂರಿನ ವ್ಯಕ್ತಿ, ಆಬಳಿಕ ಅಪರಿಚಿತನ ಜೊತೆಗೆ ವಾಟ್ಸಪ್ ನಲ್ಲಿ ಚಾಟಿಂಗ್ ಮಾಡಿದ್ದು, ಉದ್ಯೋಗದ ಬಗ್ಗೆ ಮಾಹಿತಿ ಕೇಳಿದ್ದರು.
ಉದ್ಯೋಗ ಹೇಗಿರುತ್ತದೆ, ಯಾವ ರೀತಿ ನೀವು ಮನೆಯಲ್ಲೇ ಇದ್ದು ಕೆಲಸ ಮಾಡಬಹುದು ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನೀವು ವೆಬ್ ನಲ್ಲಿ ನಿಮ್ಮದೇ ಖಾತೆ ತೆರೆಯಬೇಕು ಎಂದಿದ್ದ ಅಪರಿಚಿತ. ಅದಕ್ಕಾಗಿ ಟೆಲಿಗ್ರಾಂ ಲಿಂಕ್ ಒಂದನ್ನು ಕಳುಹಿಸಿದ್ದ. ಆನಂತರ, ಆತ ಹೇಳಿದ ರೀತಿಯಲ್ಲೇ ಟೆಲಿಗ್ರಾಂ ಲಿಂಕ್ ತೆರೆದು ಅಲ್ಲಿ ಹೊಸತಾಗಿ ಐಡಿ, ಪಾಸ್ ವರ್ಡ್ ಹಾಕಿ ಖಾತೆ ಓಪನ್ ಮಾಡಿದ್ದಾರೆ.
ವೆಬ್ ಸೈಟ್ ಮೂಲಕ ಆನ್ಲೈನಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ, ಕಮಿಷನ್ ಪಡೆದುಕೊಳ್ಳಬಹುದು. ನೇರವಾಗಿ ಯಾವುದೇ ವಸ್ತುಗಳನ್ನು ಖರೀದಿಸಲು ಅವಕಾಶ ಇರುತ್ತದೆ. ಆದರೆ, ಅದಕ್ಕಾಗಿ ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಲಿಂಕ್ ಮಾಡಿಕೊಳ್ಳಬೇಕು ಎಂದಿದ್ದಾನೆ. ಅದರಂತೆ, ಅಪರಿಚಿತ ಕಳುಹಿಸಿದ್ದ ಕ್ಯೂ ಆರ್ ಕೋಡ್ ಲಿಂಕ್ ಮೂಲಕ ಬ್ಯಾಂಕ್ ಖಾತೆಗಳನ್ನು ವ್ಯಕ್ತಿ ಲಿಂಕ್ ಮಾಡಿದ್ದರು. ಅದರ ನಂತರ, ಹಂತ ಹಂತವಾಗಿ ಹಣ ಖಾತೆಯಿಂದ ಹೋಗಿದ್ದು, ಬರೋಬ್ಬರಿ 5.31 ಲಕ್ಷ ರೂಪಾಯಿ ಹಣ ವರ್ಗಾವಣೆಯಾಗಿತ್ತು.
ಹಣ ಕಳೆದುಕೊಂಡ ಬಗ್ಗೆ ಅಪರಿಚಿತ ವ್ಯಕ್ತಿಯ ಬಳಿ ಕೇಳಿದರೆ, ಉತ್ತರ ಇರಲಿಲ್ಲ. ಗಾಬರಿಗೊಂಡ ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Man looses around 5.31 lakhs trusting fake job offer which was sent via telegram link. A case has been registered at the Cyber crime police station in Urwa.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm