ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm