ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm