ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am